ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್‌ ಫೈಟ್‌ ಕಾಯಂ...!

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬಿಜೆಪಿ-ಜೆಡಿಎಸ್‌ ಮೈತ್ರಿ ಜಿಲ್ಲೆ ಮಾತ್ರವಲ್ಲ, ಇಡೀ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಇದೇ ಮೈತ್ರಿ ಮುಂದುವರಿದರೆ ಮುಂದೆ ಎದುರಾಗಲಿರುವ ಜಿಲ್ಲಾಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದುಸ್ವಪ್ನ ಆಗೋದರಲ್ಲಿ ಅನುಮಾನವೇ ಇಲ್ಲ.



ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅದ್ಭುತ ಗೆಲುವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಹೊಸ ಭರವಸೆ ಮೂಡಿಸಿದೆ. ಅತಿ ಹೆಚ್ಚು ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆದ್ದ ಹಿನ್ನೆಲೆ ಎಲ್ಲಮುಖಂಡರಿಂದಲೂ ಮೈತ್ರಿ ಮುಂದುವರಿಕೆ ಬಗ್ಗೆ ಆಸಕ್ತಿ ಹೆಚ್ಚಾಗಿದೆ. ಇದೇ ಬೆಳವಣಿಗೆ ಈಗ ಕಾಂಗ್ರೆಸ್‌ ಪಾಳಯದಲ್ಲಿಆತಂಕ ಶುರುವಾಗಲು ಕಾರಣವಾಗಿದೆ.

 

ರಾಜಕೀಯ ಧ್ರುವೀಕರಣ ಸಾಧ್ಯತೆ

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ 8 ಕ್ಷೇತ್ರಗಳ ಪೈಕಿ 6 ಕಾಂಗ್ರೆಸ್‌ ಶಾಸಕರಿದ್ದರೂ ಕಾಂಗ್ರೆಸ್‌ ಅಭ್ಯರ್ಥಿಗೆ ಲೀಡ್‌ ಸಿಗದ ಹಿನ್ನೆಲೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕಾಂಗ್ರೆಸ್‌ ಪಾಳಯದಲ್ಲಿನಾನಾ ಚರ್ಚೆಗಳಿಗೆ ಕಾರಣವಾಗಿದೆ. ಇನ್ನೊಂದೆಡೆ ಇದೇ ಪರಿಸ್ಥಿತಿ ಮುಂದುವರಿದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊತ್ತಿಗೆ ರಾಜಕೀಯ ಧ್ರುವೀಕರಣ ಆಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

 

ಲೋಕಲ್‌ ಫೈಟ್‌ಗೆ ತಾಲೀಮು

ಇನ್ನು ಕೆಲವೇ ತಿಂಗಳಲ್ಲಿಕಳೆದ ಮೂರು ವರ್ಷಗಳಿಂದ ನಡೆಯದಿರುವ ಜಿಪಂ ಮತ್ತು ತಾಪಂ ಚುನಾವಣೆ ಎದುರಾಗಬಹುದು. ಈ ಹಿನ್ನೆಲೆಯಲ್ಲಿಎಲ್ಲರಾಜಕೀಯ ಪಕ್ಷಗಳು ಆಗಲೇ ಭರ್ಜರಿ ತಾಲೀಮು ನಡೆಸಿವೆ. ತಳಮಟ್ಟದಿಂದಲೇ ಪಕ್ಷ ಸಂಘಟನೆಗೆ ಮುಂದಾಗಿವೆ. ರಾಜ್ಯ ಸರಕಾರ ಕೂಡಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಯೋಚನೆಯಲ್ಲಿತೊಡಗಿದೆ. ಹೀಗಾಗಿ ಈಗಿನಿಂದಲೇ ಗೆಲುವಿಗೆ ರಣತಂತ್ರಗಳನ್ನು ರೂಪಿಸುತ್ತಿವೆ.

 

ಕಾಂಗ್ರೆಸ್‌ಗೆ ಮೈತ್ರಿ ಸವಾಲು

ವಿಧಾನಸಭೆ ಚುನಾವಣೆಯಲ್ಲಿಗೆದ್ದು ಬೀಗಿದ್ದ ಕಾಂಗ್ರೆಸ್‌ ಪಕ್ಷ ಲೋಕಸಭೆ ಚುನಾವಣೆಯಲ್ಲಿಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಜಾರಿ ಬಿದ್ದಿದೆ. ಕಾಂಗ್ರೆಸ್‌ ಮುಖಂಡರು ಏನೇ ಸಮಜಾಯಿಷಿ ಕೊಟ್ಟರೂ ದೋಸ್ತಿಯಿಂದ ಮತಗಳ ಕ್ರೋಢೀಕರಣ ಆಗಿ ಲೋಕಸಭೆ ಚುನಾವಣೆಯಲ್ಲಿಬಿಜೆಪಿ ಗೆಲ್ಲಲು ಕಾರಣವಾಗಿದೆ ಎಂಬುದು ನಿರ್ವಿವಾದ. ಹೀಗಾಗಿ ಕಾಂಗ್ರೆಸ್‌ ಶಾಸಕರು ಹಾಗೂ ಮುಖಂಡರು ಎಚ್ಚರ ವಹಿಸದೇ ಇದ್ದರೆ ಸಮಸ್ಯೆಯಾಗುವುದು ನಿಶ್ಚಿತ.

 

ಜಿಪಂ ಮತ್ತು ತಾಪಂ ಅಸ್ತಿತ್ವದಲ್ಲಿದ್ದಾಗ ಡಾ.ಕೆ.ಸುಧಾಕರ್‌ ಬಿಜೆಪಿ ಶಾಸಕರಾಗಿದ್ದರು. ಆಗ ಬಿಜೆಪಿಯೇ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆದರೆ ಜಿಪಂ ಮತ್ತು ತಾಪಂಗಳ ಅಧಿಕಾರ ಅವಧಿ ಮುಗಿದು ಮೂರು ವರ್ಷವಾದರೂ ನಾನಾ ಕಾರಣಗಳಿಂದ ಚುನಾವಣೆ ಮುಂದೂಡಿಕೆಯಾಗುತ್ತಲೇ ಬರುತ್ತಿದೆ. ಈಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಆದರೆ ಬಿಜೆಪಿ- ಜೆಡಿಎಸ್‌ ಮೈತ್ರಿ ಇರುವುದರಿಂದ ಕಾಂಗ್ರೆಸ್‌ ಸರಕಾರಕ್ಕೆ ಇದು ಸವಾಲೇ.. ಇದನ್ನು ಕೈ ಪಾಳಯ ಹೇಗೆ ಎದುರಿಸುತ್ತದೆ ಎನ್ನುವುದೇ ಈಗಿರುವ ಕುತೂಹಲ.

 

ಹೊಂದಾಣಿಕೆ ಮೇಲೆ ಮೈತ್ರಿ ಭವಿಷ್ಯ
 

ಇನ್ನೊಂದೆಡೆ ಬಿಜೆಪಿ-ಜೆಡಿಎಸ್‌ ಜತೆಗಿನ ಮೈತ್ರಿ ಹೀಗೆ ಮುಂದುವರಿಯುತ್ತೆ ಎಂದು ಹೇಳುವುದು ಕಷ್ಟ. ಸೀಟು ಹಂಚಿಕೆಯಲ್ಲಿಉದ್ಭವವಾಗುವ ಭಿನ್ನಾಭಿಪ್ರಾಯಗಳನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ದೋಸ್ತಿ ಅಳಿವು-ಉಳಿವು ನಿರ್ಧಾರವಾಗಲಿದೆ. ಸದ್ಯದ ಮಟ್ಟಿಗೆ ಬಿಜೆಪಿ-ಜೆಡಿಎಸ್‌ ಮುಖಂಡರು ಒಟ್ಟಾಗೇ ಇದ್ದಾರೆ. ಮುಂದೆಯೂ ದೋಸ್ತಿ ಮುಂದುವರಿಯಲಿದೆ ಎಂದು ಹೇಳುತ್ತಿದ್ದಾರೆ. ಹಾಗೇನಾದರೂ ಆದರೆ ಕಾಂಗ್ರೆಸ್‌ಗೆ ಟಫ್‌ ಫೈಟ್‌ ಕಾಯಂ.

 

ಜೆಡಿಎಸ್‌ ವರಿಷ್ಠರ ಸೂಚನೆಯಂತೆ ನಾವು ಲೋಕಸಭೆ ಚುನಾವಣೆಯಲ್ಲಿಮೈತ್ರಿ ಅಭ್ಯರ್ಥಿಯ ಗೆಲುವಿಗೆ ಒಟ್ಟಾಗಿ ಶ್ರಮಿಸಿದ್ದೇವೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ನಮ್ಮ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರು ಗೆದ್ದಿದ್ದಾರೆ. ಇದೇ ಮೈತ್ರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂಮುಂದುವರಿದರೆ ನಾವು ಅಧಿಕಾರ ಹಿಡಿಯುವುದರಲ್ಲಿಯಾವುದೇ ಅನುಮಾನವಿಲ್ಲ.

 

ಲೋಸಕಭೆ ಚುನಾವಣೆಯಲ್ಲಿಜೆಡಿಎಸ್‌-ಬಿಜೆಪಿ ಮೈತ್ರಿ ಫಲ ಕೊಟ್ಟಿದೆ. ಹೀಗಾಗಿ ಮುಂದಿನ ಎಲ್ಲಚುನಾವಣೆಗಳಲ್ಲೂಮೈತ್ರಿ ಮುಂದುವರಿಕೆ ಬಗ್ಗೆ ನಾವೂ ಮುಕ್ತವಾಗಿದ್ದೇವೆ. ನಮ್ಮ ರಾಜ್ಯ ನಾಯಕರು ಮೈತ್ರಿ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದನ್ನು ಪಾಲಿಸಲು ನಾವು ಬದ್ಧವಾಗಿದ್ದೇವೆ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ದಕ್ಷಿಣಕನ್ನಡ

ಕಡಬ ತಾಲೂಕು

ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ

ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಯಲಹಂಕ

ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಳಗಾವಿ

ಕಿತ್ತೂರು

ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ

ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಉಡುಪಿ

ಕಾರ್ಕಳ

ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 8 ಟವರ್‌ ನಿರ್ಮಾಣ – ಗ್ರಾಮಸ್ಥರ ಆಕ್ರೋಶ

ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಗದಗ

ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ : ಗ್ರಾಮ ಪಂಚಾಯತಿ ವಿರುಧ್ಧ ಗ್ರಾಮಸ್ಥರ ಆಕ್ರೋಶ

ಗದಗ: ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಚಾಮರಾಜನಗರ

ಚಾಮರಾಜನಗರ: ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಚಾಮರಾಜನಗರ

ಹೆಬ್ಬಸೂರು ಗ್ರಾ. ಪಂ ವ್ಯಾಪ್ತಿಯ ಹಿತ್ತಲಗುಡ್ಡ ಗ್ರಾಮದ ಸೋಲಿಗರ ಕಾಲನಿಯ ದುಸ್ಥಿತಿ... ಸೋರುವ ಸೂರಿನಲ್ಲಿ ಸೋಲಿಗರ ಜೀವನ

ಚಾಮರಾಜನಗರ : ಒಂದೆಡೆ ಹೊಸ ಮನೆ ನಿರ್ಮಾಣಗೊಳ್ಳುವವರೆಗೂ ಜೋಪಡಿ, ಶ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಮೈಸೂರು

ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸಿಇಒ ಸೂಚನೆ

ಮೈಸೂರು: ಕುಡಿಯುವ ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆ ಹ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಾವಣಗೆರೆ

ಜಗಳೂರು

ತೋರಣಗಟ್ಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಪ್ಪ ಅವಿರೋಧ ಆಯ್ಕೆ

ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಾವಣಗೆರೆ

ಜಗಳೂರು

ಗ್ರಾ. ಪಂಚಾಯಿತಿಯಲ್ಲಿ ಅನುದಾನ ದುರ್ಬಳಕೆ .. ? ಪಲ್ಲಾಗಟ್ಟೆ ಗ್ರಾಮದ ದಲಿತ ಕಾಲೋನಿಯಲ್ಲಿ ಮೂಲಭೂತ ಸೌಲಭ್ಯ ಮರೀಚಿಕೆ

ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1