ಗುಡಿಬಂಡೆ ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ
ಗುಡಿಬಂಡೆ: ತಾಲೂಕಿನ ವಿವಿಧ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸುವ ಮೂಲಕ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು. ಬೆಳಿಗಿನಿಂದಲೇ ದೇವರಿಗೆ ಅಭಿಷೇಕ, ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.
ಶಿವರಾತ್ರಿಯ ಅಂಗವಾಗಿ ಮುಂಜಾನೆಯಿಂದ ಪಟ್ಟಣದ ಸುರಸದ್ಮಗಿರಿ ಬೆಟ್ಟದ ರಾಮೇಶ್ವರ, ಮಾರುತಿ ವೃತ್ತದ ಚಂದ್ರಮೌಳೇಶ್ವರ, ಸೋಮೇನಹಳ್ಳಿಯ ಚಿತ್ರಾವತಿ ನದಿ ದಡದಲ್ಲಿರುವ ಚಂದ್ರಮೌಳೇಶ್ವರ, ದಿನ್ನಹಳ್ಳಿಯ ಉದ್ಬವಮೂರ್ತಿ ಪಾತಾಳೇಶ್ವರ, ಸೋಮೇಶ್ವರದ ವಿಭೂದಿನಾದ ಬೃಂಗೇಶ್ವರ, ಚೆಂಡೂರಿನ ಕಾಶಿಲಿಂಗವಾದ ಚಂದ್ರಮೌಳೇಶ್ವರ, ಬೀಚಗಾನಹಳ್ಳಿ ಚಂದ್ರಮೌಳೇಶ್ವರ, ಜಂಗಾಲಹಳ್ಳಿ ಚಂದ್ರಮೌಲೇಶ್ವರ ಸೇರಿದಂತೆ ತಾಲೂಕಿನಾದ್ಯಂತ ರುದ್ರ ದೇವ ಮಾಹಾ ಶಿವನಿಗೆ ಮಹಾ ರುಧ್ರಾಭಿಶೇಕ, ಪಂಚಾಮೃತ ಅಭಿಷೇಕ ಇತ್ಯಾದಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು. ಹಲವು ದೇವಾಲಯಗಳಲ್ಲಿ ಶಿವನ ಆರಾದನೆ, ಭಜನೆ, ಕೀರ್ತನೆಗಳು ಪಟಣೆ ಮಾಡಿದರು. ಕೆಲವು ಭಕ್ತಾದಿಗಳು ಉಪವಾಸದ ಮೂಲಕ ವ್ರತಾಚರಣೆ ನೆರವೇರಿಸಿ ಈಶ್ವರನನ್ನು ಪೂಜಿಸಿದರು.
ಗುಡಿಬಂಡೆ ಪಟ್ಟಣದ ಚಂದ್ರಮೌಳೆಶ್ವರ ದೇವಾಲಯದಲ್ಲಿ ಭಕ್ತಾದಿಗಳು ಶಿವನ ದರ್ಶನಕ್ಕೆ ಸಾಲಿಗಟ್ಟಿ ನಿಂತಿದ್ದರು. ವಿವಿಧ ಹೂ, ಹಣ್ಣುಗಳು, ತುಳಸಿ ಮಾಲೆಗಳಿಂದ ಸಿಂಗರಿಸಿದ್ದ ಈಶ್ವರನಿಗೆ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿ ಆರಾದಿಸಿದರು. ತಾಲೂಕಿನಾದ್ಯಂತ ಶಿವರಾತ್ರಿ ಪ್ರಯುಕ್ತ ತಳಿರು ತೋರಣಗಳಿಂದ, ಹೂ ಹಣ್ಣುಗಳು, ತುಳಸಿ ಧಳಗಳೊಂದಿಗೆ ಸಿಂಗರಿಸಲಾಗಿದ್ದ ಶಿವನ ದೇವಾಲಯಗಳು ಸಾಲು, ಸಾಲು ಭಕ್ತರೊಂದಿಗೆ ಹಲವು ಆರೋದನೆಯೊಂದಿಗೆ, ಶಿವನಾಮ ಸ್ಮರಣೆಯೊಂದಿಗೆ ಮಾರ್ದ್ವನಿಸಿದವು. ಗುಡಿಬಂಡೆ ಪಟ್ಟಣದ ಮಾರುತಿ ಸರ್ಕಲ್ ಬಳಿಯಿರುವ ಐತಿಹಾಸಿಕ ಹಿನ್ನೆಲೆಯ ಚಂದ್ರಮೌಳೇಶ್ವರ ದೇವರಿಗೆ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು.
ವರದಿ ಸತೀಶ ಬಾಬು ಎ
ಗುಡಿಬಂಡೆ ತಾಲ್ಲೂಕ್
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
90ನೇ ವಾರ್ಷಿಕೋತ್ಸವ: ಮಲಬಾರ್ ಮುಸ್ಲಿಂ ಅಸೋಸಿಯೇಷನ್ಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಗಣ್ಯರ ಸನ್ಮಾನ
ಬೆಂಗಳೂರು: ಸಿದ್ದರಾಮಯ್ಯ ಅವರು ಮಲಬಾರ್ ಮುಸ್ಲಿಂ ಅಸೋಸಿಯೇಷನ್ 90... ಓದನ್ನು ಮುಂದುವರಿಸಿ
ಕೋಮುವಾದ ಪರಿಸ್ಥಿತಿ ಕಾರಣವಾಗಿ ಐಟಿ-ಬಿಟಿ ಹೂಡಿಕೆ ತಡೆ — ಖರ್ಗೆ ಎಚ್ಚರಿಕೆ
ಬೆಂಗಳೂರು: ಕೋಮುವಾದದ ವಾತಾವರಣ ಕರಾವಳಿ ಭಾಗದ ಅಭಿವೃದ್ಧಿಗೆ ಅಡ್ಡ... ಓದನ್ನು ಮುಂದುವರಿಸಿ
ಸ್ಥಳೀಯ ಚುನಾವಣೆಗೆ ಮೈತ್ರಿ ಸಂಕಟ: ಜೆಡಿಎಸ್ ಪ್ಲ್ಯಾನ್–ಬಿ ಸಿದ್ಧ
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ... ಓದನ್ನು ಮುಂದುವರಿಸಿ
ಬಿಕ್ಲು ಶಿವ ಹತ್ಯೆ ಪ್ರಕರಣ ತೀವ್ರತೆ: ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ... ಓದನ್ನು ಮುಂದುವರಿಸಿ
ಜಲಾಶಯದಲ್ಲಿ ತೇಲುತ್ತಿದ್ದ ಹುಲಿ ಶವ: ಅರಣ್ಯ ಇಲಾಖೆ ತೀವ್ರ ತನಿಖೆ
ಚಾಮರಾಜನಗರ, ಫೆ.15: ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ... ಓದನ್ನು ಮುಂದುವರಿಸಿ
ಮಹಾಶಿವರಾತ್ರಿ ಸಂಭ್ರಮದಲ್ಲಿ ಕೋಲಾರ ಮಿಂದೆದ್ದಿತು; ಭಾರತ ಜಯಕ್ಕಾಗಿ ವಿಶೇಷ ಪೂಜೆ
ಕೋಲಾರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕೋಲಾರ ನಗರ ಭಕ್ತಿಭಾವದಿಂ... ಓದನ್ನು ಮುಂದುವರಿಸಿ
ಗುಡಿಬಂಡಾ
ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ
ಗುಡಿಬಂಡೆ : ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ 'ಸಮಾಜ ದಿನ' ಆಚರಣೆ: ವಿದ್ಯಾರ್ಥಿಗಳಿಂದ ಐತಿಹಾಸಿಕ ಮಾದರಿಗಳ ಪ್ರದರ್ಶನ
ಗುಡಿಬಂಡೆ: ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ... ಓದನ್ನು ಮುಂದುವರಿಸಿ
ದಾಖಲೆ ಬಜೆಟ್ ಮಧ್ಯೆ ಆದಾಯ ಒತ್ತಡ: ಸರ್ಕಾರಕ್ಕೆ 15,000 ಕೋಟಿ ರೂ. ಕೊರತೆ ಭೀತಿ
ಬೆಂಗಳೂರು, ಫೆಬ್ರವರಿ 15: ಪ್ರಸಕ್ತ 2025-26ನೇ ಆರ್ಥಿಕ ವರ್ಷಕ್ಕ... ಓದನ್ನು ಮುಂದುವರಿಸಿ
ನೆಲಮಂಗಲ
ತಾಯಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ 3 ವರ್ಷದ ಮಗು ನೀರಿನಲ್ಲಿ ಮುಳುಗಿ ದುರಂತ ಸಾವು
ನೆಲಮಂಗಲ: ಗಿಡ್ಡೆನಹಳ್ಳಿಯಲ್ಲಿ ಸಂತೋಷದ ಕ್ಷಣ ದುರಂತಕ್ಕೆ ತಿರುಗಿ... ಓದನ್ನು ಮುಂದುವರಿಸಿ