ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್ತು ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೊಸ ಕರಡು ನಿಯಮಗಳನ್ನು ಪ್ರಕಟಿಸಿದೆ. ಇದರ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣವನ್ನು ಮತ್ತಷ್ಟು ಕಠಿಣಗೊಳಿಸಲು ಸರ್ಕಾರ ಮುಂದಾಗಿದೆ.
‘ಕರ್ನಾಟಕ ಶಿಕ್ಷಣ ಸಂಸ್ಥೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಪಠ್ಯಕ್ರಮ) (ತಿದ್ದುಪಡಿ) ನಿಯಮಗಳು 2026’ ಕರಡು ಪ್ರಕಾರ, ಪೂರ್ವ ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಹೊಸ ಖಾಸಗಿ ಶಾಲೆ ಆರಂಭಿಸಲು ಆಡಳಿತ ಮಂಡಳಿಗೆ ಸ್ವಂತ ಜಾಗ ಹೊಂದಿರುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಕನಿಷ್ಠ 15 ವರ್ಷಗಳ ಲೀಸ್ ಆಧಾರಿತ ಜಾಗ ಹೊಂದಿರಬೇಕು.
ಜಾಗದ ಮಾಲೀಕತ್ವ ದೃಢೀಕರಣಕ್ಕಾಗಿ ಪಹಣಿ, ಇ-ಖಾತಾ ಅಥವಾ ಖಾತಾ ದಾಖಲೆಗಳನ್ನು ಸಲ್ಲಿಸುವುದನ್ನೂ ಕಡ್ಡಾಯಗೊಳಿಸಲಾಗಿದೆ. ಇನ್ನೊಂದು ಪ್ರಮುಖ ಅಂಶವೆಂದರೆ, ಹಾಲಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದರೆ, ಸುರಕ್ಷಿತವಾದ ಸ್ವಂತ, ಬಾಡಿಗೆ ಅಥವಾ ಲೀಸ್ ಜಾಗದ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲು ಅವಕಾಶ ನೀಡಲಾಗಿದೆ.
ಮಾನ್ಯತೆಗಾಗಿ ಅರ್ಜಿ ಸಲ್ಲಿಸುವಾಗ ಇನ್ನುಮುಂದೆ ‘ಇ-ಬ್ಯಾಂಕ್ ಗ್ಯಾರಂಟಿ’ ರೂಪದಲ್ಲಿ ಭದ್ರತಾ ಠೇವಣಿ ನೀಡುವುದು ಕಡ್ಡಾಯವಾಗಲಿದೆ. ಈ ಕರಡು ನಿಯಮಗಳ ಕುರಿತು ಸಾರ್ವಜನಿಕರು ಹಾಗೂ ಸಂಬಂಧಿತರು ತಮ್ಮ ಆಕ್ಷೇಪಣೆಗಳನ್ನು ಮುಂದಿನ 15 ದಿನಗಳೊಳಗೆ ಅಪರ ಮುಖ್ಯ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎಂ.ಎಸ್. ಕಟ್ಟಡ, ಬೆಂಗಳೂರು ಅವರಿಗೆ ಸಲ್ಲಿಸಬಹುದು. ಒಟ್ಟಿನಲ್ಲಿ, ಈ ಹೊಸ ನಿಯಮಗಳು ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶ ಹೊಂದಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಮಂಗಳೂರು
2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್
ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ... ಓದನ್ನು ಮುಂದುವರಿಸಿ
ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿ... ಓದನ್ನು ಮುಂದುವರಿಸಿ
ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ
ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್... ಓದನ್ನು ಮುಂದುವರಿಸಿ
2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವ... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ
ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ
ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ
ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!
ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ
ಮುಂಡರಗಿ
ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”
ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ