ಕಾಡಾನೆ ಕಾಟಕ್ಕೆ ಮತ್ತೊಂದು ಜೀವ ಬಲಿ – ಚಿಕ್ಕಮಗಳೂರಿನಲ್ಲಿ ಆತಂಕ
ಚಿಕ್ಕಮಗಳೂರು : ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ಮತ್ತೊಂದು ಜೀವ ಕಸಿದುಕೊಂಡಿದೆ. ಕಾಫಿ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಹೊಸಪೇಟೆ ಮೂಲದ ಬೋರಮ್ಮ (34) ದಾಳಿಯಲ್ಲಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇದೇ ತೋಟದಲ್ಲಿ 50 ವರ್ಷದ ಕಾರ್ಮಿಕ ಯಲ್ಲಪ್ಪ ಕೂಡ ಆನೆ ದಾಳಿಗೆ ಬಲಿಯಾಗಿದ್ದರು. 7 ದಿನಗಳ ಅಂತರದಲ್ಲಿ ಎರಡನೇ ಸಾವು ಸಂಭವಿಸಿರುವುದು ಸ್ಥಳೀಯರಲ್ಲಿ ಭಾರೀ ಆತಂಕ ಉಂಟುಮಾಡಿದೆ.
ಮಾಹಿತಿ ಪ್ರಕಾರ, ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಬೋರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ತಕ್ಷಣ ಕಾರ್ಯಾಚರಣೆ ಆರಂಭಿಸಿತು. 7 ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ತಂಡದ ಸಹಾಯದಿಂದ ದಾಳಿ ನಡೆಸಿದ ಕಾಡಾನೆಯನ್ನು ಸಮೀಪದ ಕಾಫಿ ತೋಟದಲ್ಲಿ ಪತ್ತೆ ಹಚ್ಚಲಾಯಿತು. ಬಳಿಕ ಅರವಳಿಕೆ ಚುಚ್ಚುಮದ್ದು ನೀಡಿ ನಿತ್ರಾಣಗೊಳಿಸಿ, ಕುಮ್ಕಿ ಆನೆಗಳ ಸಹಾಯದಿಂದ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಗಿದೆ.
ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದರೂ ಜೀವನೋಪಾಯದ ಅನಿವಾರ್ಯತೆಯಿಂದ ಕಾರ್ಮಿಕರು ತೋಟಗಳಿಗೆ ತೆರಳುತ್ತಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇದೇ ವೇಳೆ, ಮೃತದೇಹ ಸಾಗಿಸುತ್ತಿದ್ದ ವಾಹನವನ್ನು ಕಡಬಗೆರೆ ಗ್ರಾಮದಲ್ಲಿ ಗ್ರಾಮಸ್ಥರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ ನೂರಾರು ಮಂದಿ ಸಂತ್ರಸ್ತ ಕುಟುಂಬಕ್ಕೆ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಭ್ರಷ್ಟಾಚಾರ ಪುನರಾವರ್ತನೆಗೆ ಎಚ್ಚರಿಕೆ: ಬಿಜೆಪಿ ವಿರುದ್ಧ ಈಶ್ವರ್ ಖಂಡ್ರೆ ತೀವ್ರ ಟೀಕೆ
ಬೀದರ್ : ₹5 ಲಕ್ಷ ಕಮಿಷನ್ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ತನ... ಓದನ್ನು ಮುಂದುವರಿಸಿ
ರಾಯಚೂರು: ರಸ್ತೆ ಬದಿಗೆ ಬಿದ್ದ ಸರ್ಕಾರಿ ಔಷಧಿ-ಸಿರಂಜ್; ಸ್ಥಳೀಯರಲ್ಲಿ ಆಕ್ರೋಶ
ರಾಯಚೂರು: ಬಡವರಿಗೆ ವಿತರಿಸಬೇಕಾದ ಔಷಧಿಗಳನ್ನು ರಸ್ತೆ ಬದಿ ತಿಪ್ಪ... ಓದನ್ನು ಮುಂದುವರಿಸಿ
ನೆಲಮಂಗಲ
ನೆಲಮಂಗಲ: ಪರ್ಫ್ಯೂಮ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ, 40 ಸಿಬ್ಬಂದಿ ಪ್ರಾಣಾಪಾಯದಿಂದ ಪಾರು
ನೆಲಮಂಗಲ : ಪರ್ಫ್ಯೂಮ್ ಗೋದಾಮಿನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ರಾಜಕೀಯ ಸಂಕಟ : “ಗಾಂಧಿಯನ್ನು ರಾಷ್ಟ್ರಪಿತ ಎಂದು ಒಪ್ಪಲ್ಲ” – ಬಹಿರಂಗ ಸಮಾವೇಶದಲ್ಲಿ ಯತ್ನಾಳ್ ವಿವಾದಾತ್ಮಕ ಹೇಳಿಕೆ!
ಯಾದಗಿರಿ: ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್... ಓದನ್ನು ಮುಂದುವರಿಸಿ
ಮಂಗಳೂರು
ಜೀವವೇ ಕಳೆದ ಲೂಡೋ ಆಟ: ಪ್ಲಾಸ್ಟಿಕ್ ಕಾಯಿನ್ ನುಂಗಿ 8 ವರ್ಷದ ಬಾಲಕಿ ಸಾವು
ಮಂಗಳೂರು : ಲೂಡೋ ಆಟ ಆಡುತ್ತಿದ್ದ ವೇಳೆ ಪ್ಲಾಸ್ಟಿಕ್ ಕಾಯಿನ್ ನುಂ... ಓದನ್ನು ಮುಂದುವರಿಸಿ
ಬಿಜೆಪಿ ಮೇಲೆ ಸಿಎಂ ವಾಗ್ದಾಳಿ: ಚಂದ್ರು ಲಮಾಣಿ ವಿರುದ್ಧ ಲಂಚ ಆರೋಪ ಚರ್ಚೆಗೆ ಕೇಂದ್ರ
ಬೆಂಗಳೂರು : ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ವ... ಓದನ್ನು ಮುಂದುವರಿಸಿ
ವಿದ್ಯಾರ್ಥಿಗಳ ಭವಿಷ್ಯಕ್ಕೆ ಗಮನ : ಶಾಲೆ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ – ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ... ಓದನ್ನು ಮುಂದುವರಿಸಿ
“ನಾನು ಹೋಗದೇ ಮತ್ಯಾರು ಹೋಗುತ್ತಾರೆ”: ಡಿಸಿಎಂ ಶಿವಕುಮಾರ್ ದೆಹಲಿಯ ಪ್ಲಾನ್ ಸ್ಪಷ್ಟ
ಬೆಂಗಳೂರು, ಫೆ. 22 : ಡಿಪುಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್... ಓದನ್ನು ಮುಂದುವರಿಸಿ
ಹೆಚ್.ಡಿ. ಕುಮಾರಸ್ವಾಮಿ ಟೀಕೆಯನ್ನು ತಮಾಷೆಯಾಗಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಲೇಖನದ ಬಗ್ಗ... ಓದನ್ನು ಮುಂದುವರಿಸಿ
ನಾಲ್ವರು ಮಾಡಿದ ಪ್ರತಿಭಟನೆಗೆ ರಾಹುಲ್ ಗಾಂಧಿ ಹೊಣೆಗಾರರಲ್ಲ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಎಐ ಶೃಂಗಸಭೆ ವೇಳೆ ಯೂತ್ ಕಾಂಗ್ರೆಸ್ ನಡೆಸಿದ ಪ್ರತಿಭಟ... ಓದನ್ನು ಮುಂದುವರಿಸಿ