ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ದಾರುಣವಾಗಿ ಸಾವಿಗೆ ಒಳಪಟ್ಟ ಘಟನೆ ನಡೆದಿದೆ. ಮೃತರಿಗೆ ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ (53) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ನಡೆದಾಡುತ್ತಿದ್ದ ಜಲಜಾಕ್ಷಿಯ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಾಯದಿಂದ ಸ್ಥಳದಲ್ಲೇ ಮೃತರಾಗಿದ್ದಾರೆ. ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಗುಂಪು ಜನವಸತಿ ಪ್ರದೇಶಗಳಿಗೆ ನುಗ್ಗಿ ಭೀತಿಯ ವಾತಾವರಣ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಕೆಲ ದಿನಗಳ ಹಿಂದೆ ಮಡಿಕೇರಿ ತಾಲ್ಲೂಕಿನ ಗುಡ್ಡಗಾಡು ಗ್ರಾಮ ಬೆಟ್ಟತ್ತೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಕಾಡಾನೆ ದಾಳಿಗೆ ಬಲಿಯಾಗಿದ್ದರು.
ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ದಾಳಿಯಿಂದ ಜನರು ನಿರಂತರವಾಗಿ ಬಲಿಯಾಗುತ್ತಿದ್ದರೂ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆ, ಕಳೆದ ನಾಲ್ಕು ವರ್ಷಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ದಾಳಿ ಹೆಚ್ಚಾಗಿದೆ. ಕೊಡಗು ಜಿಲ್ಲೆ 32 ಸಾವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ... ಓದನ್ನು ಮುಂದುವರಿಸಿ
ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ
ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ
ಹಾವೇರಿ: ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ
ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ
ಹಾವೇರಿ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ
ಹೈದರಾಬಾದ್ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ
ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ
ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ
ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ
ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ
ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ
ಬೀದರ್ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ
ಕುಮಟಾ
ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್ಗಳಿಗೆ ತೆರವು ಆದೇಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ... ಓದನ್ನು ಮುಂದುವರಿಸಿ
DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ