"ಪಿರಿಯಾಪಟ್ಟಣದಲ್ಲಿ ಅಕ್ರಮ ಕೇರಳ ಲಾಟರಿ ಜಾಲ ಭೇದನೆ: ₹78,130 ಮೌಲ್ಯದ ವಸ್ತು ಜಪ್ತಿ, ಇಬ್ಬರ ಬಂಧನ"

ಮೈಸೂರು:- ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧಿತವಾಗಿದ್ದರೂ ಗಡಿ ಭಾಗಗಳ ಮೂಲಕ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಭೇದಿಸಿದೆ.

 

ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅರುಣ್ ಕುಮಾರ್ ಹಾಗೂ ಸ್ವಾಮಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅರುಣ್ ಕುಮಾರ್ ವೆಂಕಟೇಶ್ವರ ವೇ ಬ್ರಿಡ್ಜ್ ಸಮೀಪ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದಾಗ ಬಂಧಿಸಲಾಯಿತು. ಮತ್ತೊಂದೆಡೆ, ಸ್ವಾಮಿಯನ್ನು ಸಿಂಚನ ಹೋಟೆಲ್‌ನಲ್ಲಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದರು.

 

ಕಾರ್ಯಾಚರಣೆಯಲ್ಲಿ ಒಟ್ಟು ₹78,130 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ₹55,200 ಮೌಲ್ಯದ ಕೇರಳ ಲಾಟರಿ ಟಿಕೆಟ್‌ಗಳು ಹಾಗೂ ₹22,930 ನಗದು ಹಣ ಸೇರಿವೆ. ಅರುಣ್ ಕುಮಾರ್‌ನಿಂದ ₹33,000 ಮೌಲ್ಯದ ಟಿಕೆಟ್ ಮತ್ತು ₹20,000 ನಗದು, ಸ್ವಾಮಿಯಿಂದ ₹22,200 ಮೌಲ್ಯದ ಟಿಕೆಟ್ ಹಾಗೂ ₹2,930 ನಗದು ವಶಪಡಿಸಲಾಗಿದೆ.

 

ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ಹಾಗೂ ಹೆಚ್ಚುವರಿ ಎಸ್‌ಪಿ ಮಲ್ಲಿಕ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ಸ್‌ಪೆಕ್ಟರ್ ಗೋವಿಂದರಾಜು, ಪಿಎಸ್‌ಐ ಜಗದೀಶ್ ಹಾಗೂ ಎಸ್‌ಪಿ ಸ್ಕ್ವಾಡ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ರಾಯಚೂರು

“ಕೈಕಾಲು ತೊಳೆಯಲು ಹೋಗಿ ಕಾಲುವೆಗೆ ಜಾರಿ; ಇಬ್ಬರು ಮಹಿಳೆಯರು ಮೃತರು”

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದಲ್ಲಿ ಭತ್ತ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಕಾಫಿ ಟೋಕನ್ ಕಾರಣಕ್ಕೆ ಕಿರಿಕ್-“ಟೋಕನ್ ಕೇಳಿದ ಹೋಟೇಲ್ ಸಿಬ್ಬಂದಿಗೆ ಪೊಲೀಸ್ ದೌರ್ಜನ್ಯ

ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್ ಬಳಿ ಸಂಭವಿಸಿದ ಘಟನೆ ಯಾರು ನ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಮ್ಯಾಟ್ರಿಮೋನಿ ಮನ್ಮಥನ ಮೋಸ ಜಾಲ: 9 ಯುವತಿಯರಿಗೆ ವಂಚನೆ, ನಕಲಿ ಮಾವ ಬಂಧನ

ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಳಗಾವಿ

ಚಿಕ್ಕೋಡಿ

ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು! ಸ್ಥಳೀಯರಿಗೆ ರಸ್ತೆ ಸುರಕ್ಷತೆಯ ಎಚ್ಚರಿಕೆ

ಚಿಕ್ಕೋಡಿ/ಬೆಳಗಾವಿ:- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ರಾಯಚೂರು

ಆಲೂರು ಬಳಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ

ರಾಯಚೂರು:- ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ ಲೈ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಉತ್ತರಕನ್ನಡ

ಕಾರವಾರ

ವಸಂತ್ ನಾಯ್ಕ ಹತ್ಯೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಇಬ್ಬರಿಗೆ ಫೆ.21ರವರೆಗೆ ನ್ಯಾಯಾಂಗ ಬಂಧನ

ಕಾರವಾರ:- ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಜ್ಯ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಹೆತ್ತ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ; ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು

ಬೆಂಗಳೂರು: ನಗರದ ವಿಜ್ಞಾನನಗರದಲ್ಲಿರುವ ಆದರ್ಶ ವಿಸ್ತಾ ಅಪಾರ್ಟ್‌... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಕೆಐಎಬಿಯಲ್ಲಿ ಕಸ್ಟಮ್ಸ್ ಬಿಗಿ ಬಲೆ: ಬ್ಯಾಂಕಾಕ್ ಪ್ರಯಾಣಿಕನಿಂದ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆ

ಬೆಂಗಳೂರು: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹3.39 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಹೆಚ್‌ಎಎಲ್ ಪ್ರದೇಶದಲ್ಲಿ ರೋಡ್ ರೇಜ್ – ಕಾರಿನ ಬ್ಯಾನೆಟ್ ಮೇಲೆ ಕುಳಿತ ವ್ಯಕ್ತಿಯನ್ನು ಕಿಲೋಮೀಟರ್‌ಗೂ ಹೆಚ್ಚು ಎಳೆದ ಚಾಲಕ

ಬೆಂಗಳೂರು: ನಗರದಲ್ಲಿ ದಿನೇದಿನೇ ರೋಡ್ ರೇಜ್ ಪ್ರಕರಣಗಳು ಹೆಚ್ಚುತ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1