ರಾಜ್ಯ ಬಜೆಟ್ನಲ್ಲಿ ದೊಡ್ಡ ಘೋಷಣೆ: 56,000 ಸರ್ಕಾರಿ ಹುದ್ದೆ ಭರ್ತಿ, 5 ವರ್ಷ ವಯೋಮಿತಿ ರಿಲ್ಯಾಕ್ಸ್
ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ 56,432 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಅವರು, ಸರ್ಕಾರಿ ಹುದ್ದೆಗಳ ನೇರ ನೇಮಕಾತಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿ ಮಾತ್ರ 5 ವರ್ಷ ಸಡಿಲಿಕೆ ಮಾಡುವುದಾಗಿ ಘೋಷಿಸಿದರು. ಇದರಿಂದ ವಯೋಮಿತಿ ಸಮಸ್ಯೆಯಿಂದ ಆತಂಕದಲ್ಲಿದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಉದ್ಯೋಗ ನೇಮಕಾತಿಯಲ್ಲಿ ಒಳಮೀಸಲಾತಿ ಪ್ರಮಾಣಕ್ಕೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿ ಇರುವ ಹಿನ್ನೆಲೆ, ಅಭ್ಯರ್ಥಿಗಳಿಗೆ ಯಾವುದೇ ನಷ್ಟವಾಗದಂತೆ ವಯೋಮಿತಿಯನ್ನು ಸಡಿಲಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವ್ಯಾಪಾರ ಹಾಗೂ ಕೈಗಾರಿಕಾ ಕ್ಷೇತ್ರಕ್ಕೂ ಉತ್ತೇಜನ ನೀಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಅರಣ್ಯ ಇಲಾಖೆಯ ವಿವಿಧ ವೃಂದಗಳಲ್ಲಿ 200 ಹುದ್ದೆಗಳನ್ನು ಈ ಆರ್ಥಿಕ ವರ್ಷದಲ್ಲೇ ಭರ್ತಿ ಮಾಡಲಾಗುವುದು ಎಂದು ಘೋಷಿಸಿದರು. ಜೊತೆಗೆ ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತೋಷದ ಸುದ್ದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ
ಬೆಂಗಳೂರು: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಭರ್ತಿ ಮಾಡ... ಓದನ್ನು ಮುಂದುವರಿಸಿ
ಧಾರವಾಡ ಪ್ರತಿಭಟನೆಯ ನಂತರ: ಒಳ ಮೀಸಲಾತಿ ಗಡುವಿಗೆ ರಾಜ್ಯಪಾಲರು ಅನುಮೋದನೆ
ಬೆಂಗಳೂರು : ಧಾರವಾಡದಲ್ಲಿ ವಿದ್ಯಾರ್ಥಿ ಮತ್ತು ಉದ್ಯೋಗಾಕಾಂಕ್ಷಿಗ... ಓದನ್ನು ಮುಂದುವರಿಸಿ
ಅರಣ್ಯ, ವನ್ಯಜೀವಿ ಕ್ಷೇತ್ರದಲ್ಲಿ ವೃತ್ತಿ ಅವಕಾಶ: PRO ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಂಪರ್ಕಾಧಿಕಾ... ಓದನ್ನು ಮುಂದುವರಿಸಿ
ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ
SC-ST ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಅವಕಾಶ: 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ!
ಕೊಪ್ಪಳ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಪರಿಶ... ಓದನ್ನು ಮುಂದುವರಿಸಿ
ಅಗ್ನಿಶಾಮಕ ಹುದ್ದೆಗಳಲ್ಲಿ ಬದಲಾವಣೆ : ‘ಫೈರ್ಮ್ಯಾನ್’ ಬದಲಾಗಿ ‘ಫೈರ್ ಫೈಟರ್’ – ಮಹಿಳಾ ಅಭ್ಯರ್ಥಿಗಳಿಗೆ ಶೇ.10 ಮೀಸಲಾತಿ
ಬೆಂಗಳೂರು: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ... ಓದನ್ನು ಮುಂದುವರಿಸಿ
BSNL 2026 ನೇಮಕಾತಿ: ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನ... ಓದನ್ನು ಮುಂದುವರಿಸಿ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ: ಸಹಕಾರಿ ಹಾಲು ಉತ್ಪಾದಕರ ಸಂಘ ಒಕ್ಕೂಟ 194 ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಉ... ಓದನ್ನು ಮುಂದುವರಿಸಿ
ಕಾನೂನು ಪದವಿಧಾರರಿಗೆ ಸುನಿಹ ಸುದ್ದಿ: ಡೆಲ್ಲಿ ಹೈಕೋರ್ಟ್ನಲ್ಲಿ 152 ಹುದ್ದೆಗಳ ಭರ್ಜರಿ ನೇಮಕಾತಿ!
ನವದೆಹಲಿ : ಹೈಕೋರ್ಟ್ಗಳಲ್ಲಿ 152 ಹುದ್ದೆಗಳ ನೇಮಕಾತಿ ಪ್ರಕ್ರಿ... ಓದನ್ನು ಮುಂದುವರಿಸಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..!
ಬೆಂಗಳೂರು: ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ... ಓದನ್ನು ಮುಂದುವರಿಸಿ