ಸರ್ಜಾಪುರ–ಹೆಬ್ಬಾಳ ರೆಡ್ ಲೈನ್‌ಗೆ ಕೇಂದ್ರದ ಆಕ್ಷೇಪ: ಡಬಲ್ ಡೆಕ್ಕರ್ ಮಾದರಿಗೆ ವಿರೋಧ

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ–ಕೇಂದ್ರ ನಡುವಿನ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ, ಬಹು ನಿರೀಕ್ಷಿತ ಸರ್ಜಾಪುರ–ಹೆಬ್ಬಾಳ ಮೆಟ್ರೋ ರೆಡ್ ಲೈನ್ ಯೋಜನೆಗೆ ಕೇಂದ್ರ ಸರ್ಕಾರದಿಂದ ಆಕ್ಷೇಪ ವ್ಯಕ್ತವಾಗಿದೆ. ಯೋಜನೆಯ ಡಿಪಿಆರ್ (ವಿಸ್ತೃತ ಯೋಜನಾ ವರದಿ)ಗೆ ಕೇಂದ್ರ ಸರ್ಕಾರ ತಿದ್ದುಪಡಿ ಸೂಚಿಸಿದ್ದು, ಡಬಲ್ ಡೆಕ್ಕರ್ ಮಾದರಿಯಲ್ಲಿ ಸಂಪೂರ್ಣ ಮಾರ್ಗ ನಿರ್ಮಾಣಕ್ಕೆ ಸ್ಪಷ್ಟ ವಿರೋಧ ವ್ಯಕ್ತಪಡಿಸಿದೆ. ಸುಮಾರು ₹28,405 ಕೋಟಿ ಅಂದಾಜು ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆ ನೀಡಿ ಕೇಂದ್ರಕ್ಕೆ ಕಳುಹಿಸಿತ್ತು. 37 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ 28 ನಿಲ್ದಾಣಗಳು ಇರಲಿದ್ದು, ಐಟಿ ಕಾರಿಡಾರ್ ಹಾಗೂ ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಯೋಜನೆಯಾಗಿ ಪರಿಗಣಿಸಲಾಗಿದೆ.

 

ಕೇಂದ್ರದ ಆಕ್ಷೇಪ ಏನು?

ಡಬಲ್ ಡೆಕ್ಕರ್ ಮಾದರಿಯಲ್ಲಿ ಸಂಪೂರ್ಣ ಮಾರ್ಗ ನಿರ್ಮಿಸಿದರೆ ನಿರೀಕ್ಷಿತ ಮಟ್ಟದಲ್ಲಿ ಪ್ರಯಾಣಿಕರ ಸಂಖ್ಯೆ ಇರದೇ ಇರಬಹುದು ಎಂಬ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ. ಹೀಗಾಗಿ ಅಗತ್ಯವಿರುವ ಪ್ರಮುಖ ಜಂಕ್ಷನ್‌ಗಳಲ್ಲಷ್ಟೇ ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದೆ. ಸಂಪೂರ್ಣ ಮಾರ್ಗವನ್ನು ಡಬಲ್ ಡೆಕ್ಕರ್ ರೂಪದಲ್ಲಿ ನಿರ್ಮಿಸುವ ಪ್ರಸ್ತಾವನೆಯನ್ನು ಮರುಪರಿಶೀಲಿಸಿ ತಿದ್ದುಪಡಿ ಡಿಪಿಆರ್ ಸಲ್ಲಿಸಲು ಸೂಚಿಸಲಾಗಿದೆ.

ಯೋಜನೆಗೆ ವಿಳಂಬ ಸಾಧ್ಯತೆ?

ಮೂಲ ಯೋಜನೆಯಂತೆ 2031ರೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇತ್ತು. ಆದರೆ ಕೇಂದ್ರದ ಆಕ್ಷೇಪದಿಂದ ಅನುಮೋದನೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಈ ಬೆಳವಣಿಗೆ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ಐಟಿ ಹಬ್‌ಗಳಾದ ಸರ್ಜಾಪುರ, ಮರವಳ್ಳಿಹಳ್ಳಿ, ಹೊರಮಾವು ಮತ್ತು ಹೆಬ್ಬಾಳ ಭಾಗಗಳನ್ನು ಸಂಪರ್ಕಿಸುವ ಈ ರೆಡ್ ಲೈನ್ ಯೋಜನೆ ನಗರ ಸಂಚಾರ ದಟ್ಟಣೆ ತಗ್ಗಿಸುವ ಪ್ರಮುಖ ಯೋಜನೆ ಎಂದು ಪರಿಗಣಿಸಲಾಗಿದೆ. ಮುಂದಿನ ಕ್ರಮಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಮಹಿಳೆಯರ ಉಚಿತ ಬಸ್ ಪ್ರಯಾಣ: ಹಳೆಯ ಆಧಾರ್ ಬಿಟ್ಟು ಇನ್ಮುಂದೆ ಶಕ್ತಿ ಸ್ಮಾರ್ಟ್ ಕಾರ್ಡ್!

ಬೆಂಗಳೂರು : ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಖಾಸಗಿ ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಕಡ್ಡಾಯ: ಫೆಬ್ರವರಿ 28ರೊಳಗೆ ಎಲ್ಲಾ ನಿಯಮ ಪಾಲನೆ ಅಗತ್ಯ

ಬೆಂಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸೆಂಟ್ರಲ್ ಇನ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1

“ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಮಹಿಳೆಯರಿಗೆ ಉಚಿತ LPG ಸ್ಟೌವ್ & ಸಿಲಿಂಡರ್! ಹೀಗೆ ಅರ್ಜಿ ಸಲ್ಲಿಸಿ.”

ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) – ಸಂಕ್ಷಿಪ್ತ ಮಾಹಿತಿ

... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಮೈಸೂರು

ಮೈಸೂರು–ಅರಸೀಕೆರೆ ರೈಲುಗಳಲ್ಲಿ ಕಾಲುವೆ ಕಾಮಗಾರಿಯ ಕಾರಣ ವಿಲಂಬ, ಕೆಲವು ರೈಲುಗಳು ರದ್ದು

ಮೈಸೂರು: ಫೆಬ್ರವರಿ 16ರ ಸೋಮವಾರ, ಹಬ್ಬನಘಟ್ಟ ಮತ್ತು ಅರಸೀಕೆರೆ ನ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ ತಡೆ: ಡಬಲ್ ಡೆಕ್ಕರ್ ಯೋಜನೆ ಮರುಪರಿಶೀಲನೆಗೆ ಕೇಂದ್ರ ಸೂಚನೆ

ಬೆಂಗಳೂರು: ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್ ಯೋಜನೆಗೆ ಕೇಂದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬೆಂಗಳೂರಿಗರಿಗೆ ಸಿಕ್ತು ಸಿಹಿಸುದ್ದಿ! ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ತೊಂದರೆಗೆ ತೆರೆ: ಬೆಂಗಳೂರಿಗೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು!

ಬೆಂಗಳೂರು: ಶಕ್ತಿ ಯೋಜನೆ ಆರಂಭವಾದ ಬಳಿಕ ಬಿಎಂಟಿಸಿ ಬಸ್‌ಗಳಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಯಲಹಂಕ

ಫೇಕ್ ಆ್ಯಪ್ ಸ್ಕ್ಯಾಮ್: ಸ್ಕ್ಯಾನ್ ಮಾಡಿದ್ರೂ ಹಣ ಖಾತೆಗೆ ಬರಲ್ಲ! ವ್ಯಾಪಾರಸ್ಥರೇ ಎಚ್ಚರ

ಬೆಂಗಳೂರು : ಯಲಹಂಕ ನ್ಯೂಟೌನ್ ಪ್ರದೇಶದಲ್ಲಿ ಅಂಗಡಿ ಮಾಲೀಕರನ್ನು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ವ್ಯಾಲೆಂಟೈನ್ಸ್‌ ಡೇಗೆ ಮಹಿಳೆಯರಿಗೆ ಗುಡ್​​​ ನ್ಯೂಸ್ ..! ಬೆಂಗಳೂರಿನಲ್ಲಿ ಮಹಿಳೆಯರಿಗೆ ವಿಶೇಷ ‘ಸಖಿ ಆಟೋ’ ಸೇವೆ ಪ್ರಾರಂಭ

ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರಿನಲ್ಲಿ ಮಹಿಳೆಯರಿಗೆ ವಿಶ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಕೇಂದ್ರ ಸರ್ಕಾರ ಪಡಿತರಕ್ಕೆ ನಗದು ವರ್ಗಾವಣೆ ವ್ಯವಸ್ಥೆ: ಫಲಾನುಭವಿಗಳಿಗೆ ನೇರ ಲಾಭ

ಇಲ್ಲಿಯವರೆಗೆ ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳನ್ನು ಪಡಿತರ ಅಂಗಡಿಗಳ ಮೂಲಕ ವಿತರಿಸಲಾ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ಎಲಾನ್ ಮಸ್ಕ್ ಘೋಷಣೆ: ಮುಂದಿನ 10 ವರ್ಷಗಳಲ್ಲಿ ಚಂದ್ರನ ಮೇಲೆ ಸ್ವಾಯತ್ತ ನಗರ ನಿರ್ಮಾಣ

ಜಗತ್ತಿನಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೂಮಿಯ ಮೇಲೆ ವಾಸಕ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1