ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ

ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣದಲ್ಲಿ ತಮಿಳುನಾಡಿನ 9 ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಪ್ರಕರಣವನ್ನು ನ್ಯಾಯಾಲಯ “ಅಪರೂಪದಲ್ಲಿ ಅಪರೂಪ” ಎಂದು ಪರಿಗಣಿಸಿದೆ. 2020ರ ಜೂನ್ 19ರಂದು ಲಾಕ್‌ಡೌನ್ ನಿಯಮ ಉಲ್ಲಂಘನೆ ಆರೋಪದಡಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯರಾಜ್ ಮತ್ತು ಅವರ ಪುತ್ರ ಬೆನಿಕ್ಸ್ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಇಬ್ಬರ ಮೇಲೂ ಕ್ರೂರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

 

ಹಲ್ಲೆಯ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಕೇವಲ ಮೂರು ದಿನಗಳೊಳಗೆ ಇಬ್ಬರೂ ಸಾವನ್ನಪ್ಪಿದ್ದರು, ಇದರಿಂದ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ತನಿಖೆಯಲ್ಲಿ ಇಬ್ಬರ ದೇಹದಲ್ಲಿ ಗಂಭೀರ ಗಾಯಗಳು ಪತ್ತೆಯಾಗಿದ್ದು, ಗುದನಾಳದ ರಕ್ತಸ್ರಾವ ಸೇರಿದಂತೆ ಅಮಾನವೀಯ ಹಿಂಸೆ ನಡೆದಿರುವುದು ಬಹಿರಂಗವಾಯಿತು.

 

ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. ತನಿಖೆಯ ನಂತರ ಒಬ್ಬ ಇನ್ಸ್‌ಪೆಕ್ಟರ್ ಹಾಗೂ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 9 ಪೊಲೀಸರನ್ನು ಬಂಧಿಸಲಾಯಿತು. ವಿಚಾರಣೆ ವೇಳೆ ಮಹಿಳಾ ಕಾನ್‌ಸ್ಟೆಬಲ್ ನೀಡಿದ ಹೇಳಿಕೆ, ಠಾಣೆಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಅಳಿಸಿರುವುದು ಪ್ರಮುಖ ಸಾಕ್ಷಿಗಳಾಗಿ ಪರಿಗಣಿಸಲಾಯಿತು. ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಕಠಿಣ ಶಿಕ್ಷೆ ವಿಧಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1

ತಮಿಳುನಾಡು ಚುನಾವಣೆ ಕಾವು: ನಟ ವಿಜಯ್ ಭರ್ಜರಿ ರೋಡ್ ಶೋ

ಚೆನೆಲ್ಲೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

16 ವರ್ಷದ ಬಾಲಕಿಯೊಬ್ಬಳ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ

ಲಕ್ನೋ: ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಸಿಎಂ ಸ್ಥಾನ ತ್ಯಾಗದ ಸುಳಿವು? ನಿತೀಶ್ ಕುಮಾರ್ ಮುಂದಿನ ಹೆಜ್ಜೆ ಕುತೂಹಲ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಉದ್ದಿಮೆಗಳಿಗೆ ಕೇಂದ್ರದ ಬೃಹತ್ ನೆರವು – 2.5 ಲಕ್ಷ ಕೋಟಿ ಕ್ರೆಡಿಟ್ ಗ್ಯಾರಂಟಿ ಯೋಜನೆ ಸಿದ್ಧ

ದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮದಿಂದ ಭಾರತದ ಹಲವು ಕ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮಣಿಪುರದಲ್ಲಿ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ

ಇಂಪಾಲ: ಮಣಿಪುರದಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್

ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ

ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!

ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!

ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1