ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಆಧಾರವಿಲ್ಲದೆ ಮಾತನಾಡಬಾರದು ಎಂದು ಎಚ್ಚರಿಸಿದ್ದಾರೆ. ನವನಗರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು. ಆಧಾರ ಸಹಿತವಾಗಿ ಮಾತನಾಡಲಿ” ಎಂದು ಹೇಳಿದರು.
ಬಿಜೆಪಿಯ ಯತ್ನಾಳ್ ಮತ್ತು ವಿಶ್ವನಾಥ್ ಅವರೇ ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ ಎಂದು ಸಿಎಂ ಪ್ರತಿಕ್ರಿಯಿಸಿದರು. ಜಾತಿ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, “ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಪರವಾಗಿ ನಾನು ಪ್ರಚಾರ ಮಾಡಿದ್ದೇನೆ. ನಾವು ಜಾತಿ ನೋಡದೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತೇವೆ” ಎಂದರು.
ಮುಖ್ಯಮಂತ್ರಿ ಸ್ಥಾನ ಕುರಿತು ಮಾತನಾಡಿದ ಅವರು, “ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಪ್ರತಾಪ್ ಸಿಂಹ ಅವರ ಅಸಂಸದೀಯ ಪದ ಬಳಕೆಯ ಬಗ್ಗೆ ಟೀಕಿಸಿದ ಸಿಎಂ, ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದರು. ಉಪಚುನಾವಣೆ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಎರಡೂ ಕ್ಷೇತ್ರಗಳಲ್ಲಿ ಪಕ್ಷಕ್ಕೆ ನಿರೀಕ್ಷೆ ಮೀರಿ ಬೆಂಬಲ ದೊರಕುತ್ತಿದ್ದು, ಗೆಲುವು ನಮ್ಮದೇ ಎಂದು ಹೇಳಿದರು. ಯಡಿಯೂರಪ್ಪ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ನೀಡಿದ್ದು, ರಾಜಕೀಯ ಕದನ ಮತ್ತಷ್ಟು ತೀವ್ರಗೊಂಡಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್ಗೆ ಅರ್ಜಿ, ಮರುತನಿಖೆ ಬೇಡಿಕೆ!
ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ
ನರಸಿಂಹರಾಜಪುರ
ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ
ಹಸುಗಳ ಶೆಡ್ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ
ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ
ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!
ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ
ಕೂಡ್ಲಿಗಿ
ಬೀದಿ ನಾಯಿಯ ಅಟ್ಟಹಾಸ – 3 ವರ್ಷದ ಬಾಲಕಿ ಸೇರಿ ಐವರಿಗೆ ಗಾಯ, ಆತಂಕದಲ್ಲಿ ನಾಗರೀಕರು
ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಬೀದಿ ನಾಯಿ... ಓದನ್ನು ಮುಂದುವರಿಸಿ
ಉಪಚುನಾವಣೆ ಕಾವು ತಾರಕ್ಕೇರಿತು – ಇಂದು ಪ್ರಚಾರಕ್ಕೆ ತೆರೆ, ಅಂತಿಮ ಕಸರತ್ತು ಜೋರಾಗಿ!
ದಾವಣಗೆರೆ/ಬಾಗಲಕೋಟೆ: ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್... ಓದನ್ನು ಮುಂದುವರಿಸಿ
ಎಲ್ಪಿಜಿ ಅಭಾವದ ಹೊಡೆತ – ಸಂಕಷ್ಟದಲ್ಲಿ ಆಟೋ ಚಾಲಕರು, ಸರ್ಕಾರಕ್ಕೆ ಬಂದ್ ಎಚ್ಚರಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸ... ಓದನ್ನು ಮುಂದುವರಿಸಿ
ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ
“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ
ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ
“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು
ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ