ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!
ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆಗಳಲ್ಲೇ ಮೊಟ್ಟೆ ಬೇಯಿಸುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಗಾಗಿ ಗ್ಯಾಸ್ ಸಿಲಿಂಡರ್, ಸ್ಟವ್ ಮತ್ತು ಪಾತ್ರೆ ಖರೀದಿಗೆ ಅನುಮೋದನೆ ನೀಡಲಾಗಿದ್ದು, ಇನ್ನುಮುಂದೆ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ಶಾಲೆಗಳಲ್ಲಿ ಮೊಟ್ಟೆ ಬೇಯಿಸಬೇಕು ಎಂದು ನಿರ್ಧಾರವಾಗಿದೆ.
ಪ್ರಾಯೋಗಿಕ ಹಂತದಲ್ಲಿ ಧಾರವಾಡ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ಕೆ ಮಾಡಲಾಗಿದೆ. ಅಗತ್ಯ ಅನುದಾನ ಬಿಡುಗಡೆ ಮಾಡಿದ್ದು, ಯೋಜನೆಯ ಯಶಸ್ಸಿನ ಆಧಾರದ ಮೇಲೆ ರಾಜ್ಯಾದ್ಯಂತ ವಿಸ್ತರಿಸುವ ಉದ್ದೇಶವಿದೆ. ಈ ಹಿಂದೆ ಇಸ್ಕಾನ್ ಮತ್ತು ಅದಮ್ಯ ಚೇತನ ಸಂಸ್ಥೆಗಳ ಮೂಲಕ ಶಾಲೆಗಳಿಗೆ ಬಿಸಿಯೂಟ ಪೂರೈಕೆ ಆಗುತ್ತಿದ್ದು, ಮೊಟ್ಟೆ ಬೇಯಿಸುವುದು ಸಮಸ್ಯೆಯಾಗಿತ್ತು. ಹೊಸ ವ್ಯವಸ್ಥೆಯಲ್ಲಿ ಶಿಕ್ಷಕರಿಗೆ ಹೆಚ್ಚುವರಿ ಹೊಣೆಗಾರಿಕೆ ಬಂದಿದ್ದು, ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಜವಾಬ್ದಾರಿ ಸಹ ಶಿಕ್ಷಕರ ಮೇಲೆ ಬಿದ್ದಿರುವುದರಿಂದ ಆತಂಕ ವ್ಯಕ್ತವಾಗಿದೆ.
ಪ್ರತಿ ಮೊಟ್ಟೆಗೆ ₹6 ಅನುದಾನ ನೀಡಲಾಗಿದ್ದು: ₹5 ಮೊಟ್ಟೆ ಖರೀದಿಗೆ, 50 ಪೈಸೆ ಇಂಧನಕ್ಕೆ, 30 ಪೈಸೆ ಮೊಟ್ಟೆ ಸುಲಿಯಲು, 20 ಪೈಸೆ ಸಾಗಾಣಿಕೆಗೆ ನಿಗದಿಪಡಿಸಲಾಗಿದೆ. ಆದರೂ ಮೊಟ್ಟೆ ದರ ಏರಿಳಿತದಿಂದ ಇಂಧನ ವೆಚ್ಚವನ್ನು ನಿರ್ವಹಿಸುವುದು ಕಷ್ಟವಾಗಬಹುದು ಎಂದು ಶಿಕ್ಷಕರಲ್ಲಿ ಆತಂಕ ಮೂಡಿದೆ. ಧಾರವಾಡದಲ್ಲಿ ಒಟ್ಟು 1,128 ಶಾಲೆಗಳಿದ್ದು, 140 ಶಾಲೆಗಳಿಗೆ ಈಗಾಗಲೇ ಅಗತ್ಯ ಸೌಲಭ್ಯಗಳಿವೆ. ಉಳಿದ ಶಾಲೆಗಳಿಗೆ ₹2.51 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಯೋಜನೆ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಪ್ರಮುಖ ಪ್ರಯತ್ನವಾಗಿದ್ದರೂ, ಶಿಕ್ಷಕರಿಗೆ ಹೆಚ್ಚುವರಿ ಹೊಣೆಗಾರಿಕೆ ಮತ್ತು ಸವಾಲುಗಳನ್ನು ತಂದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ
ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ
ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ
ಮುಂಡರಗಿ
ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”
ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ
ಮನೆ ಮನೆಗೆ ಭೇಟಿ, ಹಳೆಯ ವಿದ್ಯಾರ್ಥಿಗಳ ಸಹಕಾರ: ಮಕ್ಕಳನ್ನು ಶಾಲೆಗೆ ಬರಿಸಲು ಮಧು ಬಂಗಾರಪ್ಪ ನಿರ್ದೇಶನ
ಬೆಂಗಳೂರು: 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ದಾಖಲಾತಿ ಅ... ಓದನ್ನು ಮುಂದುವರಿಸಿ
ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ
ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ... ಓದನ್ನು ಮುಂದುವರಿಸಿ
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್... ಓದನ್ನು ಮುಂದುವರಿಸಿ
SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್ಟಿಕೆಟ್ ತೋರಿಸಿ ಉಚಿತ ಪ್ರಯಾಣ
ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್... ಓದನ್ನು ಮುಂದುವರಿಸಿ
ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ